ನವದೆಹಲಿ: ಪಠಾಣ್ಕೋಟ್ ದಾಳಿಗೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದ ಪಾಕಿಸ್ತಾನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಭಾರತದ ತಾಳ್ಮೆಗೂ ಒಂದು ಮೀತಿ ಇದ್ದು, ಮುಂದಿನ ವರ್ಷಗಳಲ್ಲಿ ಅದರ ಫಲಿತಾಂಶವನ್ನು ಜಗತ್ತು ನೋಡಲಿದೆ ಎಂದಿದ್ದಾರೆ.