ದಲಿತ ವಿದ್ಯಾರ್ಥಿಗಳ ಬಗ್ಗೆ ತಾರತಮ್ಯ ತೋರಿರುವು ದತ್ತಾತ್ರೇಯ ಅವರು ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತ್ರ ಬರೆದು ದಲಿತ ವಿದ್ಯಾರ್ಥಿಗಳು ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಈ ಕಾರಣದಿಂದಾಗಿ ರೋಹಿತ್ ವೇಮುಲಾ ಸೇರಿದಂತೆ ಇತರ ಐವರು ಸಂಶೋಧನಾ ವಿದ್ಯಾರ್ಥಿಗಳನ್ನು ಹೈದ್ರಾಬಾದ್ ಸೆಂಟ್ರಲ್ ಯುನಿವರ್ಸಿಟಿ ವಜಾಗೊಳಿಸಿತ್ತು. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಈ ಘಟನೆ ನಡೆದಿತ್ತು. ವಜಾಗೊಳಿಸಿದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ನಿಲಯದಿಂದಲೂ ಉಚ್ಛಾಟಿಸಿದ್ದು, ಈ ವಿದ್ಯಾರ್ಥಿಗಳು ಹೊರಗೆ ಟೆಂಟ್ ಹಾಕಿ ವಾಸವಾಗಿದ್ದರು.