ರೋಹಿತ್‌ಗೆ ಮಾನಸಿಕ ಸಮಸ್ಯೆ ಇತ್ತು, ಜಾತಿ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿಲ್ಲ: ಬಿಜೆಪಿ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ...
ಆತ್ಮಹತ್ಯೆ ಮಾಡಿಕೊಂಡ ರೋಹಿತ್
ಆತ್ಮಹತ್ಯೆ ಮಾಡಿಕೊಂಡ ರೋಹಿತ್
Updated on
ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಜಾತಿ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ, ಜಾತಿ ಕಾರಣದಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಮತ್ತು ವಿವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದಿದೆ.
ಆತ್ಮಹತ್ಯೆ ಮಾಡಿಕೊಂಡ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾಗೆ ಮಾನಸಿಕ ಸಮಸ್ಯೆಗಳಿದ್ದವು ಎಂಬುದು ಅವರ ಆತ್ಮಹತ್ಯೆ ನೋಟ್‌ನಲ್ಲಿ ಪತ್ತೆಯಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ್ ರಾವ್ ಅವರು ಹೇಳಿದ್ದಾರೆ.
'ಆತನ ಹಲವು ಭಾಷಣಗಳ ವಿಡಿಯೋವನ್ನು ಗಮನಿಸಿದರೆ, ಆತ ಯಾಕೂಬ್ ಮೇಮನ್‌ರಂತಹ ಉಗ್ರರಿಗೆ ಬೆಂಬಲ ನೀಡುವ ವಿಚಾರಧಾರೆ ಹೊಂದಿದ್ದ' ಎಂದು ರಾವ್ ರಾಷ್ಟ್ರೀಯ ದೈನಿಕವೊಂದಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com