ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷರ ಭೇಟಿ: ದೆಹಲಿಯಾದ್ಯಂತ ಬಿಗಿ ಭದ್ರತೆ

ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷ ಹೊಲಾಂಡೆ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ...
ಪ್ಯಾರಾಮಿಲಿಟರಿ ಸಿಬ್ಬಂದಿ
ಪ್ಯಾರಾಮಿಲಿಟರಿ ಸಿಬ್ಬಂದಿ
Updated on

ನವದೆಹಲಿ: ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲಾಂಡೆ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ರಾಜಭವನ, ಕೆಂಪುಕೋಟೆ ಸುತ್ತಮುತ್ತಲು ಪ್ಯಾರಾಮಿಲಿಟರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಹದ್ದಿನ ಕಣ್ಣಿಟ್ಟಿದ್ದಾರೆ.

ಈ ಮಧ್ಯೆ ಹೊಲಾಂಡೆ ಅವರ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರಾನ್ಸ್ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸುವ ಬೆದರಿಕೆ ಪತ್ರದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಚೆನ್ನೈನಿಂದ ಬಂದ ಪತ್ರದಲ್ಲಿ ಫ್ರಾನ್ಸ್ ಅಧ್ಯಕ್ಷರು ಭಾರತಕ್ಕೆ ಬರಬಾರದು. ಬಂದಿದ್ದೆ ಆದರೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಚೆಂಗಲ್ ರೆಡ್ಡಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com