ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದ ಕೇಂದ್ರ ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಷ್ಟ್ರಪತಿ ಆಡಳಿತಕ್ಕೆ ಅಷ್ಟೊಂದು ಆತುರ ಏಕೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಅಲ್ಲದೆ ಈ ಸಂಬಂಧ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿರುವ ಕೋರ್ಟ್ ಜನವರಿ 29ರೊಳಗೆ ಸಂವಿಧಾನಿಕ ಬಿಕ್ಕಟ್ಟಿನ ಬಗ್ಗೆ ವರದಿ ನೀಡುವಂತೆ ಸೂಚಿಸಿ, ವಿಚಾರಣೆಯನ್ನು ಫೆಬ್ರುವರಿ 1ಕ್ಕೆ ಮುಂದೂಡಿದೆ.