ದಲಿತ ವಿದ್ಯಾರ್ಥಿ ಆತ್ಮಹತ್ಯೆ: ಎಸ್‌ಸಿ/ಎಸ್‌ಟಿ ಶಿಕ್ಷಕರಿಂದ ಅಮರಣಾಂತ ಉಪವಾಸ

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮತ್ತಷ್ಟು ತೀವ್ರತೆ...
ರೋಹಿತ್ ವೇಮುಲಾ
ರೋಹಿತ್ ವೇಮುಲಾ
Updated on
ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಮತ್ತಷ್ಟು ತೀವ್ರತೆ ಪಡೆದುಕೊಳ್ಳುತ್ತಿದ್ದು, ಇದೀಗ ವಿವಿಯ ಎಸ್‌ಸಿ/ಎಸ್‌ಟಿ ಶಿಕ್ಷಕರ ವೇದಿಕೆ ಕುಲಪತಿ ಅಪ್ಪಾ ರಾವ್ ಅವರ ರಾಜಿನಾಮೆಗೆ ಒತ್ತಾಯಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ವಿಪಿನ್ ಶ್ರೀವಾಸ್ತವ ಅವರನ್ನು ಮಧ್ಯಂತರ ಕುಲಪತಿಯಾಗಿ ನೇಮಕ ಮಾಡಿರುವ ಬಗ್ಗೆಯೂ ಆಘಾತ ವ್ಯಕ್ತಪಡಿಸಿರುವ ಎಸ್‌ಸಿ/ಎಸ್‌ಟಿ ವೇದಿಕೆ, ಕಾರ್ಯಕಾರಿ ಪರಿಷತ್‌ನ ಉಪ ಸಮಿತಿಯ ಮುಖ್ಯಸ್ಥರಾಗಿದ್ದ ಶ್ರೀವಾಸ್ತವ ಅವರೇ ರೋಹಿತ್ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದೆ. ಅಲ್ಲದೆ ಶ್ರೀವಾಸ್ತವ ಅವರು ಈ ಹಿಂದೆ 2008ರಲ್ಲಿ ಮತ್ತೊಬ್ಬ ದಲಿತ ವಿದ್ಯಾರ್ಥಿ ಸೆಂತಿಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಿದೆ.
ಈ ಮುಂಚೆ ರೋಹಿತ್ ಆತ್ಮಹತ್ಯೆ ಪ್ರಕರಣ ಸಂಬಂಧ ವಿವಿ 11 ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಹುದ್ದೆಗಳಿಗೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com