ಅಸಹಿಷ್ಣುತೆ ಅಪಾಯ ಮಟ್ಟಕ್ಕೆ ಬಂದು ನಿಂತಿದೆ ಎಂದು ಕೆಲವರು ಹೇಳುತ್ತಾರೆ. ಇನ್ನು ಕೆಲವರು ದೇಶದಲ್ಲಿ ಅಸಹಿಷ್ಣುತೆ ಇಲ್ಲವೇ ಇಲ್ಲ ಎಂದು ವಾದಿಸುತ್ತಿದ್ದಾರೆ. ಆದರೆ, ನಾನು ಇವರೆಡೂ ಹೇಳಿಕೆಗಳನ್ನು ನಂಬುವುದಿಲ್ಲ. ಸತ್ಯವೆಂಬದು ಈ ಎರಡು ಹೇಳಿಕೆಗಳ ನಡುವೆಯೇ ಇದೆ. ಭಾರತೀಯ ಸಮಾಜ ಯಾವಾಗಲೂ ಸಹಿಷ್ಣುತೆಯಿಂದ ಕೂಡಿದೆ. ಕೆಲವು ಗುಂಪುಗಳು ಮಾತ್ರ ಯಾವಾಗಲೂ ಯುದ್ಧ ಬಯಸುತ್ತಿರುತ್ತವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.