ಉತ್ತರ ಪ್ರದೇಶ: ಬಂಧಿಸಲು ಹೋದ ಹರ್ಯಾಣ ಪೊಲೀಸ್ ಅಧಿಕಾರಿಯನ್ನೇ ದೋಚಿದ ಕಳ್ಳರು!

ಮೂರು ಜನ ಶಂಕಿತ ಕಳ್ಳರನ್ನು ಪ್ರಶ್ನಿಸಲು ಹೋದ ಹರ್ಯಾಣದ ಪೊಲೀಸ್ ಇನ್ಸ್ಪೆಕ್ಟರ್ ನ್ನೇ ಕಳ್ಳರು ದೋಚಿರುವ ಘಟನೆ ಉತ್ತರ ಪ್ರದೇಶ- ಹರ್ಯಾಣ ಗಡಿ ಭಾಗದಲ್ಲಿ ನಡೆದಿದೆ.
ಉತ್ತರ ಪ್ರದೇಶ
ಉತ್ತರ ಪ್ರದೇಶ
Updated on

ಮಥುರಾ: ಮೂರು ಜನ ಶಂಕಿತ ಕಳ್ಳರನ್ನು ಬಂಧಿಸಲು ಹೋದ ಹರ್ಯಾಣದ ಪೊಲೀಸ್ ಇನ್ಸ್ಪೆಕ್ಟರ್ ನ್ನೇ ಕಳ್ಳರು ದೋಚಿರುವ ಘಟನೆ ಉತ್ತರ ಪ್ರದೇಶ- ಹರ್ಯಾಣ ಗಡಿ ಭಾಗದಲ್ಲಿ ನಡೆದಿದೆ.

ಗುರ್ಗಾಂವ್ ನ ಇನ್ಸ್ ಪೆಕ್ಟರ್ ಸುರೇಂದ್ರ ಮೂವರು ಕಳ್ಳರ ಬಗ್ಗೆ ಮಾಹಿತಿ ಪಡೆದು ಅವರನ್ನು ವಿಚಾರಣೆ ನಡೆಸಲು ತೆರಳಿದ್ದಾರೆ. ಈ ವೇಳೆ ಕಳ್ಳರೇ ಪೊಲೀಸ್ ಇನ್ಸ್ ಪೆಕ್ಟರ್ ಬಳಿ ಇದ್ದ ವಸ್ತುಗಳನ್ನು ದೋಚಿದ್ದಾರೆ. ಕಳ್ಳರನ್ನು ಬಂಧಿಸಿ ಪೊಲೀಸ್ ಠಾಣೆಯತ್ತ ಕಾರು ಚಲಾಯಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಈ ಘಟನೆ ನಡೆದಿದ್ದು ದೋಚಿದ್ದಷ್ಟೇ ಅಲ್ಲದೆ ಇನ್ಸ್ ಪೆಕ್ಟರ್ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಮಥುರಾ ಎಸ್ ಪಿ ಅರುಣ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳ್ಳರು ತಮ ಮೇಲೆ ಹಲ್ಲೆ ನಡೆಸಿದ ಬೆನ್ನಲ್ಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಈ ಮಾಹಿತಿಯನ್ನು ಸುರೇಂದ್ರ ಅವರು ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಗೆ ರವಾನಿಸಲಾಗಿದೆ, ನಂತರ ಪೊಲೀಸ್ ಠಾಣೆಯವರು ಇನ್ಸ್ ಪೆಕ್ಟರ್ ಸುರೇಂದ್ರ ಅವರನ್ನು ಕರೆದೊಯ್ದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com