ಮೀಟರ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಪ್ರಕರಣವನ್ನು ಎಸಿಬಿ ತನಿಖೆಗೆ ವಹಿಸಿದೆ. ಅಲ್ಲದೆ, ಈಗಾಗಲೇ ಮೂವರು ಅಪರಿಚಿತರ ಮೇಲೂ ಎಫ್ಐಆರ್ ದಾಖಲಿಸಿದೆ. ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರಿಗೆ ನೋಟಿಸ್ ಜಾರಿಗೊಳಿಸಿರುವುದನ್ನು ಖಚಿತ ಪಡಿಸಿರುವ ಎಸಿಬಿಯ ವಿಶೇಷ ಪೊಲೀಸ್ ಆಯುಕ್ತ ಎಂ.ಕೆ. ಮೀನಾ, ಜಲಮಂಡಳಿಯ ಮುಖ್ಯಸ್ಥೆ ಕೂಡ ಆಗಿದ್ದ ಶೀಲಾ ದೀಕ್ಷಿತ್ ಅವರು ಪ್ರಕರಣಕ್ಕೆ ಸಂಬಂಧಿಸಿ ಉತ್ತರದಾಹಿಯಾಗಿದ್ದಾರೆ. ಹೀಗಾಗಿ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.