ಎಎಪಿ ಸರ್ಕಾರದಿಂದ ಕೇಂದ್ರದ ವಿರುದ್ಧ ಫುಲ್ ಪೇಜ್ ಜಾಹೀರಾತು

ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಆಮ್ ಆದ್ಮಿ ಪಕ್ಷದ ಸರ್ಕಾರ ಗುರುವಾರ ನರೇಂದ್ರ ಮೋದಿ ಸರ್ಕಾರದ...
ಆಪ್ ಸರ್ಕಾರದ ಜಾಹೀರಾತು
ಆಪ್ ಸರ್ಕಾರದ ಜಾಹೀರಾತು
ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಆಮ್ ಆದ್ಮಿ ಪಕ್ಷದ ಸರ್ಕಾರ ಗುರುವಾರ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಫುಲ್ ಪೇಜ್ ಜಾಹೀರಾತು ನೀಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಆಮ್ ಆದ್ಮಿ ಸರ್ಕಾರ ಜಾಹೀರಾತಿನಲ್ಲಿ ಆರೋಪಿಸಿದೆ.
ದೆಹಲಿಯ ಚುನಾಯಿತ ಸರ್ಕಾರದೊಂದಿಗೆ ಸಮಾಲೋಚನೆ ನಡೆಸದೆ ಕೇಂದ್ರ ಸರ್ಕಾರ ದೆಹಲಿ ಹೊರಗಡೆ ಇರುವ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಇದ್ದಕ್ಕಿದಂತೆ ವರ್ಗಾವಣೆ ಮಾಡುತ್ತಿದೆ ಎಂದು ಆಪ್ ಸರ್ಕಾರ ಆರೋಪಿಸಿದೆ.
ದೆಹಲಿ ಜನತೆ ಏಕೆ ನೋವು ಅನುಭವಿಸಬೇಕು ಎಂಬ ಶೀರ್ಷಿಕೆಯಡಿ ದೆಹಲಿ ಸರ್ಕಾರ ಜಾಹೀರಾತು ಪ್ರಕಟಿಸಿದ್ದು, ಜಾಹೀರಾತಿನ ಕೆಳಗಡೆ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರ ಭಾವಚಿತ್ರವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com