ದೆಹಲಿ ಸರ್ಕಾರದ ಜಾಗೃತ ಸಂವಹನ ವ್ಯವಸ್ಥೆ ಇಂಡಿಯಾ ಲಿಮಿಟೆಡ್ ಎಂಬ ಸಾರ್ವಜನಿಕ ವಲಯ ಘಟಕದ ಮಾಜಿ ಮತ್ತು ಈಗಿನ ವ್ಯವಸ್ಥಾಪಕ ನಿರ್ದೇಶಕರಾದ ಆರ್. ಎಸ್.ಕೌಶಿಕ್ ಮತ್ತು ಜಿ.ಕೆ.ನಂದಾ ಅವರನ್ನು ಬಂಧಿಸಿದ್ದು, ಟೆಂಡರ್ ನೀಡಿಕೆಯಲ್ಲಿ ಅಕ್ರಮವಾಗಿ ಖಾಸಗಿ ಕಂಪೆನಿಗೆ ಅನುಕೂಲ ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ. ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ಕರೆದವರಿಗೆ ಬೆದರಿಕೆಯೊಡ್ಡುತ್ತಿದ್ದ ಆರೋಪವೂ ಇವರ ಮೇಲಿದೆ.