ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ನಿರಾಳ

ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ

ನವದೆಹಲಿ: ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಈ ಹಿಂದೆ ವಿಚಾರಣಾ ನ್ಯಾಯಾಲಯದ ನೀಡಿದ್ದ ಆದೇಶವನ್ನು ದೆಹಲಿ ಹೈ ಕೋರ್ಟ್ ಮಂಗಳವಾರ ತಳ್ಳಿಹಾಕಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನಿರಾಳ ಲಭಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಮತ್ತು ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಇತರೆ ಸಂಸ್ಥೆ, ಕಾಂಗ್ರೆಸ್ ಪಕ್ಷದ  2010-11ನೇ ಸಾಲಿನ ದಾಖಲೆಗಳನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ಈ ಹಿಂದೆ ಆದೇಶ ನೀಡಿತ್ತು.

ಈ ಆದೇಶದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇದರಂತೆ ಮೇಲ್ಮನವಿಯನ್ನು ಇಂದು ವಿಚಾರಣೆ ನಡೆಸಿರುವ ದೆಹಲಿ ಹೈ ಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ತೇಜಿಯವರು ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ್ದು, ಏಪ್ರಿಲ್ 18 ರವರೆಗೂ ತೀರ್ಪು ಕಾಯ್ದಿರಿಸಿದ್ದಾರೆ. ಹೈಕೋರ್ಟ್ ನ ಈ ಆದೇಶದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ನಿರಾಳ ಸಿಕ್ಕಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com