ಸಿಂಹಗಳ ಮುಂದೆ ಸೆಲ್ಫಿಗೆ ಫೋಸ್: ಜಡೇಜಾ ಹೇಳಿಕೆ ಪಡೆದ ಅರಣ್ಯಾಧಿಕಾರಿಗಳು

ಗಿರ್ ಅರಣ್ಯದಲ್ಲಿನ ಸಫಾರಿಗೆ ತೆರಳಿದ್ದ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಜೀಪ್ ನಿಂದ ಕೆಳಗಿಳಿದು ಸಿಂಹಗಳ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದ...
ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ಅಹಮದಾಬಾದ್: ಗಿರ್ ಅರಣ್ಯದಲ್ಲಿನ ಸಫಾರಿಗೆ ತೆರಳಿದ್ದ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಜೀಪ್ ನಿಂದ ಕೆಳಗಿಳಿದು ಸಿಂಹಗಳ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಅರಣ್ಯಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.

ಜಡೇಜಾ ಮತ್ತು ಅವರ ಪತ್ನಿ ಜುನಾಗಢ್ ಜಿಲ್ಲೆಯ ಸಸಾನ್ ಗಿರ್ ನಲ್ಲಿ ಸಿಂಹಗಳ ಜತೆ ಫೋಸ್ ನೀಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಫೋಟೋಗಳನ್ನು ಗಮನಿಸಿದ ಅರಣ್ಯಾಧಿಕಾರಿಗಳು ಭಾರತದ ಕ್ರಿಕೆಟರ್ ನಿಯಮ ಉಲ್ಲಂಘಿಸಿ ಸಫಾರಿ ಜೀಪ್ ನಿಂದ ಕೆಳಕ್ಕಿಳಿದು ಫೋಟೋ ತೆಗೆಸಿಕೊಂಡಿದ್ದರಿಂದ ಹೇಳಿಕೆ ನೀಡುವಂತೆ ಸಮನ್ಸ್ ನೀಡಿದ್ದರು.

ಸಮನ್ಸ್ ಹಿನ್ನೆಲೆ ಜಡೇಜಾ ಅವರು ಹೇಳಿಕೆ ನೀಡಿದ್ದು, ಹೇಳಿಕೆ ಪರಿಶೀಲನೆ ನಂತರ ಅವರ ವಿರುದ್ಧ ಯಾವ ಕ್ರಮಕೈಗೊಳ್ಳಬೇಕು ಎಂಬದನ್ನು ನಿರ್ಧರಿಸಲಾಗುವುದು ಎಂದು ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ ಎಪಿ ಸಿಂಗ್ ತಿಳಿಸಿದ್ದಾರೆ.

ಗಿರ್ ರಾಷ್ಟ್ರೀಯ ಉದ್ಯಾನವನ ಸಂರಕ್ಷಿತ ಅರಣ್ಯವಾಗಿದ್ದು ಪ್ರವಾಸಿಗರು ವಾಹನಗಳಿಂದ ಕೆಳಗಿಳಿಯಲು ಅವಕಾಶವಿಲ್ಲ. ಈಗಿದ್ದರು ಜಡೇಜಾ ಅರಣ್ಯದಲ್ಲಿ ವಾಹನದಿಂದ ಕೆಳಕ್ಕಿಳಿದು ಸಿಂಹಗಳ ಜತೆ ಸೆಲ್ಫಿ ತೆಗೆಸಿಕೊಂಡಿದ್ದರ ವಿರುದ್ಧ ಅರಣ್ಯಾಧಿಕಾರಿಗಳು ತನಿಖೆಗೆ ಆದೇಶಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com