ಅಬ್ದುಲ್ ಕಲಾಂ ಅವರ ಸಮಾಧಿ ಸ್ಥಳದಲ್ಲಿ ಸ್ಮಾರಕಕ್ಕೆ ಶಂಕು ಸ್ಥಾಪನೆ: ಪರ್ರಿಕರ್

ಮಾಜಿ ರಾಷ್ಟ್ರಪತಿ ದಿವಂಗತ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಗೌರವಾರ್ಥ ಸ್ಮಾರಕಕ್ಕೆ ಶಂಕುಸ್ಥಾಪನೆ ಇದೇ...
ಡಾ.ಎ.ಪಿ.ಜೆ.ಅಬ್ದುಲ್ ಕಲಾಂ(ಸಂಗ್ರಹ ಚಿತ್ರ)
ಡಾ.ಎ.ಪಿ.ಜೆ.ಅಬ್ದುಲ್ ಕಲಾಂ(ಸಂಗ್ರಹ ಚಿತ್ರ)
Updated on
ನವದೆಹಲಿ: ಮಾಜಿ ರಾಷ್ಟ್ರಪತಿ ದಿವಂಗತ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಗೌರವಾರ್ಥ ಸ್ಮಾರಕಕ್ಕೆ ಶಂಕುಸ್ಥಾಪನೆ ಇದೇ 27ರಂದು ಅವರ ಸಮಾಧಿ ಸ್ಥಳ ತಮಿಳು ನಾಡಿನ ರಾಮೇಶ್ವರದಲ್ಲಿ ನೆರವೇರಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಉತ್ತರಿಸಿದ ಅವರು, ಸ್ಮಾರಕ ನಿರ್ಮಾಣಕ್ಕೆ 5 ಎಕರೆ ಜಾಗ ಬೇಕಾಗಿದ್ದು, 1.8 ಎಕರೆ ಜಾಗ ಮಾತ್ರ ಸಿಕ್ಕಿದೆಯಷ್ಟೆ ಎಂದರು.
ನಮ್ಮ ಯೋಜನೆಗೆ ತಮಿಳುನಾಡು ಸರ್ಕಾರ ಸಹಕಾರ ನೀಡುತ್ತಿದೆ. ಸ್ಮಾರಕದ ವಿನ್ಯಾಸ ಅಂತಿಮಗೊಂಡಿದ್ದು, ಇನ್ನು ಉಳಿದ ಭೂಮಿ ಸಿಗಲು ಕಾಯುತ್ತಿಲ್ಲ. ಈಗಿರುವ ಭೂಮಿಯಲ್ಲಿ ಕೆಲಸ ಮುಂದುವರಿಸುತ್ತೇವೆ ಎಂದರು.
ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಕಳೆದ ವರ್ಷ ಜುಲೈ 27ರಂದೇ ನಿಧನರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com