ಹೂಡಾಗೆ ಮತ್ತಷ್ಟು ಸಂಕಷ್ಟ: ಅಕ್ರಮ ಹಣ ವರ್ಗಾವಣೆ, ಆರೋಪದಲ್ಲಿ ಕೇಸ್ ದಾಖಲು

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಸಿಂಗ್ ಹೂಡಾ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ..
ಭೂಪೀಂದರ್ ಸಿಂಗ್ ಹೂಡಾ
ಭೂಪೀಂದರ್ ಸಿಂಗ್ ಹೂಡಾ

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪೀಂದರ್ ಸಿಂಗ್ ಹೂಡಾ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.

ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್  ಮತ್ತು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗಳಿಗೆ ಕಾನೂನು ಬಾಹಿರವಾಗಿ ಭೂಮಿ ಹಂಚಿಕೆ ಮಾಡಿದ ಆರೋಪದಡಿಯಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆ ಪ್ರಕಾರ ಭೂಪೀಂದರ್ ಸಿಂಗ್ ಹೂಡಾ ಸೇರಿ ಹಲವರ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಭೂಪೀಂದರ್ ಸಿಂಗ್ ಹೂಡಾ ಹರ್ಯಾಣದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್​ಗೆ ಪಂಚಕುಲಾದಲ್ಲಿ ಅಕ್ರಮವಾಗಿ ಭೂಮಿ ಹಂಚಿಕೆ ಮಾಡಿದ್ದರು ಎಂದು ಆಪಾದಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಸಮಯದಲ್ಲಿ ಕೈಗಾರಿಕಾ ಭೂಮಿ ಹಂಚಿಕೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿ ಈಗಾಗಲೇ ಹೂಡಾ ಮೇಲೆ ಸಿಬಿಐ ಕಣ್ಣಿಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com