ತಮಿಳುನಾಡಿನಲ್ಲಿ ಲಾರಿ-ಬಸ್ ನಡುವೆ ಭೀಕರ ಅಪಘಾತ: 10 ಸಾವು, 30 ಗಾಯ

ಕೃಷ್ಣಗಿರಿಯಿಂದ ಹೊಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ...
ಅಪಘಾತ
ಅಪಘಾತ

ಕೃಷ್ಣಗಿರಿ: ಕೃಷ್ಣಗಿರಿಯಿಂದ ಹೊಸೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೊಸೂರು ಕಡೆಯಿಂದ ಕೃಷ್ಣಗಿರಿ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕ ಅತಿ ವೇಗವಾಗಿ ಚಲಿಸಿ ರಸ್ತೆ ವಿಭಜನೆಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ನುಗ್ಗಿದೆ. ಈ ವೇಳೆ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹತ್ತು ಪ್ರಯಾಣಿಕರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರು ಗಾಯಾಳುಗಳನ್ನು ಕೃಷ್ಣಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸ್ಧಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬಸ್ ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಇನ್ನು ಸೂಲಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com