ಪ್ರಚೋದನಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಹಜಿಪುರ ನಿವಾಸಿ ಅಜಿತ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೈರಾಮ್ ಪ್ರಸಾದ್ ಅವರು, ಮಾಯಾವತಿ ಹಾಗೂ ಇತರೆ ಮೂವರು ನಾಯಕರಾದ ಬಿಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸಿಮುದ್ದೀನ್ ಸಿದ್ದಿಖಿ, ಉತ್ತರ ಪ್ರದೇಶ ಘಟಕದ ಅಧ್ಯಕ್ಷ ರಾಮ್ ಅಚಲ್ ರಾಜಭರ್ ಮತ್ತು ರಾಜ್ಯ ಕಾರ್ಯದರ್ಶಿ ಮೇವಾಲಾಲ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಗರ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ.