ಇದು ಇತ್ತೀಚಿನ ತಿಂಗಳಲ್ಲಿ ಪಾಕಿಸ್ತಾನ ನೀಡಿದ ಕಠೋರ ಹೇಳಿಕೆಯಾಗಿದ್ದು, ಇದಕ್ಕೆ ಕಳೆದ ಶನಿವಾರ ಪ್ರತಿಕ್ರಿಯಿಸಿದ್ದ ಭಾರತ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರನ್ನು ಉದ್ದೇಶಿಸಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರುವ ನಿಮ್ಮ ಕನಸು ನನಸಾಗುವುದಿಲ್ಲ ಎಂದು ಹೇಳಿತ್ತು. ಪಾಕಿಸ್ತಾನ ಯಾವುದೇ ಮುಜುಗರವಿಲ್ಲದೆ ಭಯೋತ್ಪಾದನೆಯನ್ನು ಅಪ್ಪಿಕೊಳ್ಳುತ್ತಿದೆ ಎಂದು ಹೇಳಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಕಾಶ್ಮೀರ ಭಾರತಕ್ಕೆ ಸೇರಿದ್ದು ಎಂದು ಪ್ರತಿಕ್ರಿಯಿಸಿದ್ದರು.