ಲಖನೌ: ಕಾಂಗ್ರೆಸ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿಗಾಗಿ ಶೀಲಾ ದಿಕ್ಷಿತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿರುವುದು ತಪ್ಪು ಬೆಳವಣಿಗೆ. ಅವರಿಗೆ ತುಂಬಾ ವಯಸ್ಸಾಗಿದ್ದು, ಗೆಲುವು ಸಾಧಿಸುವುದು ಕಷ್ಟ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಶುಕ್ರವಾರ ಹೇಳಿದೆ. ಅಲ್ಲದೆ ಅವರ ಬದಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕಿತ್ತು ಎಂದು ವ್ಯಂಗ್ಯವಾಡಿದೆ.