ಆಪ್ ಶಾಸಕ ನರೇಶ್‌ ಯಾದವ್‌ ಗೆ ಜಾಮೀನು

ಕುರಾನ್‌ ಅಪವಿತ್ರಗೊಳಿಸಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ಆಪ್‌ ಶಾಸಕ ನರೇಶ್‌ ಯಾದವ್‌ ಅವರಿಗೆ ಸ್ಥಳೀ ಕೋರ್ಟ್ ಶನಿವಾರ...
ನರೇಶ್  ಯಾದವ್
ನರೇಶ್ ಯಾದವ್
Updated on
ಸಂಗ್ರುರ್: ಕುರಾನ್‌ ಅಪವಿತ್ರಗೊಳಿಸಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ಆಪ್‌ ಶಾಸಕ ನರೇಶ್‌ ಯಾದವ್‌ ಅವರಿಗೆ ಸ್ಥಳೀ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ನರೇಶ್ ಯಾದವ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧಿಶ ಎ.ಎಸ್.ವಿರ್ಕ್ ಅವರು ಜಾಮೀನು ಮಂಜೂರು ಮಾಡಿದ್ದಾರೆ ಎಂದು ಎಎಪಿ ಕಾನೂನು ಘಟಕದ ಮುಖ್ಯಸ್ಥ ಹಿಮ್ಮತ್ ಸಿಂಗ್ ಶೆರ್ಗಿಲ್ ಅವರು ಹೇಳಿದ್ದಾರೆ.
ಜೂನ್‌ 24ರಂದು ನಡೆದ ಕುರಾನ್‌ ದಹನ ಪ್ರಕರಣ ಸಂಬಂಧ ಕಳೆದ ಭಾನುವಾರ ನರೇಶ್ ಯಾದವ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು  ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿತ್ತು.
ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾಗಿರುವ ಪ್ರಮುಖ ಆರೋಪಿ ವಿಜಯ್‌ ಕುಮಾರ್‌ ಎಂಬಾತ ವಿಚಾರಣೆ ವೇಳೆ ನರೇಶ್‌ ಯಾದವ್‌ ಅವರ ಅಣತಿಯಂತೆ ನಾನು ಕುರಾನ್‌ ನನ್ನು ಹರಿದಿ¨ªೆ ಎಂದು ಮಾಹಿತಿ ನೀಡಿರುವ ಕಾರಣ ಪೊಲೀಸರು ಆಪ್ ಶಾಸಕನ ವಿರುದ್ಧವೂ ಎಫ್ಐಆರ್‌ ದಾಖಲಿಸಿಕೊಂಡಿದ್ದರು. 
"ಈ ಕೃತ್ಯ ಎಸಗಲು ನನಗೆ 1 ಕೋಟಿ ರುಪಾಯಿ ಆಮಿಷ ಒಡ್ಡಲಾಗಿತ್ತು. ದೀನಾನಗರ್‌ ಮತ್ತು ಪಠಾಣ್‌ಕೋಟ್‌ ದಾಳಿಯ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಲಾಗಿದ್ದು, ನಾವು ಪಾಕಿಸ್ಥಾನ ಮತ್ತು ಮುಸ್ಲಿಂ ವಿರೋಧಿಗಳು' ಎಂದು ವಿಜಯ್‌ ಕುಮಾರ್‌ ಹೇಳಿಕೆ ನೀಡಿದ್ದ. ಬಳಿಕ ನ್ಯಾಯಾಲಯವು ಯಾದವ್‌ ವಿರುದ್ಧ ಬಂಧನದ ವಾರಂಟ್‌ ಜಾರಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com