ಅರ್ನಬ್ ಗೋಸ್ವಾಮಿ ವಿರುದ್ಧ ಜಾಕೀರ್ ನಾಯ್ಕ್ 500 ಕೋಟಿ ಮಾನನಷ್ಟ ಮೊಕದ್ದಮೆ

ನನ್ನ ವಿರುದ್ಧ ಮಾಧ್ಯಮದಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ವಿವಾದಾತ್ಮಕ ಇಸ್ಲಾಂ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ಟೈಮ್ಸ್ ನೌ ಸುದ್ದಿ ವಾಹಿನಿ...
ಅರ್ನಬ್ ಗೋಸ್ವಾಮಿ, ಜಾಕೀರ್ ನಾಯ್ಕ್
ಅರ್ನಬ್ ಗೋಸ್ವಾಮಿ, ಜಾಕೀರ್ ನಾಯ್ಕ್
Updated on

ಮುಂಬೈ: ನನ್ನ ವಿರುದ್ಧ ಮಾಧ್ಯಮದಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ವಿವಾದಾತ್ಮಕ ಇಸ್ಲಾಂ ಧರ್ಮ ಪ್ರಚಾರಕ ಜಾಕೀರ್ ನಾಯ್ಕ್ ಟೈಮ್ಸ್ ನೌ ಸುದ್ದಿ ವಾಹಿನಿ ಎಡಿಟರ್ ಅರ್ನಬ್ ಗೋಸ್ವಾಮಿ ವಿರುದ್ಧ 500 ಕೋಟಿ ರುಪಾಯಿ ಮೌಲ್ಯದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾನೆ.

ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಸೃಷ್ಟಿಸುತ್ತಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದರ ಜತೆ ಕೋಮುಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಮುಸ್ಲಿಂರು ಮತ್ತು ಜಾಕೀರ್ ನಾಯಕ್ ಬಗ್ಗೆ ಸುದ್ದಿವಾಹಿನಿಯಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಾಕೀರ್ ಪರ ವಕೀಲ ಮುಬಿನ್ ಸೊಲ್ಕಾರ್ ಅರ್ನಬ್ ಗೆ ನೋಟಿಸ್ ನೀಡಿದ್ದಾರೆ.

ಬಾಂಗ್ಲಾದೇಶ ಢಾಕಾದಲ್ಲಿ ಇತ್ತೀಚೆಗೆ ನಡೆದ ಉಗ್ರ ದಾಳಿಗೆ ಪ್ರಚೋದನೆ ನೀಡಿರುವ ಅಪಾದನೆ ಎದುರಿಸುತ್ತಿರುವ ಜಾಕೀರ್ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com