ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾದರೇ ಬಿಜೆಪಿಗೆ ಅಚ್ಛೇ ದಿನ್: ಸ್ಮೃತಿ ಇರಾನಿ ಲೇವಡಿ

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದರೇ ಬಿಜೆಪಿಗೆ ಅಚ್ಛೇದಿನ್ ಎಂದು ಸ್ಮತಿ ಇರಾನಿ ಸಂದರ್ಶನದ ವೇಳೆ ತಿಳಿಸಿದ್ದಾರೆ. ರಾಹುಲ್ ಕಾಂಗ್ರೆಸ್ ..
ಸ್ಮತಿ ಇರಾನಿ ಮತ್ತು  ರಾಹುಲ್ ಗಾಂಧಿ
ಸ್ಮತಿ ಇರಾನಿ ಮತ್ತು ರಾಹುಲ್ ಗಾಂಧಿ

ನವದೆಹಲಿ:  ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಕಾಂಗ್ರೆಸ್ ನಲ್ಲಿ ಸದ್ದಿಲ್ಲದೇ ವೇದಿಕೆ ಸಿದ್ಧವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ರಾಹುಲ್ ವಿರುದ್ಧ ಟೀಕೆ ಮಾಡಿದ್ದಾರೆ.

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದರೇ ಬಿಜೆಪಿಗೆ ಅಚ್ಛೇದಿನ್ ಎಂದು ಸ್ಮತಿ ಇರಾನಿ ಸಂದರ್ಶನದ ವೇಳೆ ತಿಳಿಸಿದ್ದಾರೆ. ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾಗುವುದರ ಅರ್ಥ ಬಿಜೆಪಿಗೆ ಒಳ್ಳೆಯ ದಿನ ಎಂಬುದು ಎಂದು ಅವರು ಲೇವಡಿ ಮಾಡಿದ್ದಾರೆ.

ಇನ್ನೂ ರಾಯ್ ಬರೇಲಿಗೆ ನಿನ್ನೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿ ನೀಡಿದ್ದರು. ಈ ವೇಳೆ ರಾಹುಲ್ ಪಟ್ಟಾಭಿಷೇಕ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಕಾರಿನ ಒಳಗೆ ಹೋಗಿ ಕೂತರು ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com