ಮುಂಬೈ: ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಬೀವಂಡಿಯಲ್ಲಿರುವ ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.
ಗುರುವಾರ ಬೆಳಿಗ್ಗೆ ಆಕಸ್ಮಿಕವಾಗಿ ಜವಳಿ ಕಾರ್ಖಾನೆಗೆ ಬೆಂಕಿ ತಗುಲಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಈವರೆಗೆ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ. ಬೆಂಕ ನಂದಿಸುವ ಕಾರ್ಯಚರಣೆ ನಡೆಸಲಾಗುತ್ತಿದ್ದು, ಜವಳಿ ಕಾರ್ಖಾನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.