ದಕ್ಷಿಣ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಮೂವರು ಯೋಧರು ಹುತಾತ್ಮ

ದಕ್ಷಿಣ ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಡಿ ರಕ್ಷಣಾ ಪಡೆಯ ಸಿಬ್ಬಂದಿ ಮೇಲೆ ಶುಕ್ರವಾರ ಉಗ್ರರು ದಾಳಿ ನಡೆಸಿದ್ದು,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ದಕ್ಷಿಣ ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಡಿ ರಕ್ಷಣಾ ಪಡೆಯ ಸಿಬ್ಬಂದಿ ಮೇಲೆ ಶುಕ್ರವಾರ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಜ್ ಬೆಹರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್ಎಫ್ ಕಾವಲುಪಡೆಯ ಮೇಲೆ ಉಗ್ರರ ಗುಂಡಿನ ದಾಳಿ ದುರದೃಷ್ಟಕರ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ ಕೆ.ರಾಜೇಂದ್ರ ಅವರು ಹೇಳಿದ್ದಾರೆ.
ಉಗ್ರರ ದಾಳಿಯಲ್ಲಿ ಮುಖ್ಯ ಪೇದೆ ಗಿರಿಶ್ ಕುಮಾರ್ ಶುಕ್ಲಾ, ಪೇದೆ ಮಹಿಂದರ್ ರಾಮ್ ಹಾಗೂ ಹವಾಲ್ದಾರ್ ದಿನೇಶ್ ಅವರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಗಡಿ ರಕ್ಷಣಾ ಪಡೆಯ ಮಹಾ ನಿರ್ದೇಶ ಕೆ.ಕೆ.ಶರ್ಮಾ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com