ದೆಹಲಿ: ಕಾಂಗ್ರೆಸ್ ಮುಖಂಡೆ ಹಾಗೂ ಕೇಂದ್ರದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಜಿ ಸಚಿವೆ ರೇಣುಕಾ ಚೌಧುರಿ ಅವರ ಫೋಟೋ ವೈರಲ್ ಆಗಿದ್ದು, ಟ್ಟಿಟ್ಟರ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರೇಣುಕಾ ಚೌಧುರಿ ಕುಟುಂಬ ಸಮೇತ ರಾತ್ರಿ ಊಟಕ್ಕೆ ತೆರಳಿದ್ದರು. ರೇಣುಕಾ ಕುಟುಂಬಸ್ಥರೆಲ್ಲರೂ ಕುರ್ಚಿಗಳಲ್ಲಿ ಕುಳಿತು ಊಟ ಮಾಡುತ್ತಿದ್ದರೇ, ಮನೆಗೆಲಸದ ಬಾಲಕಿಯನ್ನು ತಮ್ಮ ಪಕ್ಕ ನಿಲ್ಲಿಸಿಕೊಂಡು ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.ಆದರೆ ರೇಣುಕಾ ಚೌಧುರಿ ಯಾವ ಕಾರಣಕ್ಕಾಗಿ ಆ ಬಾಲಕಿಯನ್ನು ನಿಲ್ಲಿಸಿದ್ದಾರೆಂದು ತಿಳಿದು ಬಂದಿಲ್ಲ. ಈ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಟ್ವಿಟ್ಟರ್ ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ರೇಣುಕಾ ಚೌಧುರಿ ಕನಿಷ್ಠ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಟ್ವಿಟ್ ಮಾಡಿದ್ದಾರೆ. ಇದೊಂದು ಆಧುನಿಕ ಗುಲಾಮಗಿರಿ ಎಂದು ಆಕ್ರೋಶ ವ್ಯಕ್ತ ಪಡಿಸಲಾಗಿದೆ.
Advertisement