ನಂತರ ಮಥುರಾ ಘರ್ಷಣೆ ಬಗ್ಗೆ ವಿಷಾಧ ವ್ಯಕ್ತಪಡಿಸಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈಗಷ್ಟೇ ಮಥುರಾದಿಂದ ಆಗಮಿಸಿದ್ದೇನೆ. ಅಗತ್ಯ ಬಿದ್ದರೆ ನಾನು ಮಥುರಾಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ನನಗೆ ಈಗಷ್ಟೇ ತಿಳಿಯಿತು ಅಲ್ಲಿ ಘರ್ಷಣೆಯಿಂದಾಗಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆಂದು. ಸುದ್ದಿ ಕೇಳಿ ತುಂಬಾ ಬೇಸರವಾಗಿದೆ. ನನ್ನ ಅಗತ್ಯ ಬಿದ್ದರೆ ನಾನು ಮತ್ತೆ ಮಥುರಾಗೆ ತೆರಳುವೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಯಿಸಿರುವ ಬಿಜೆಪಿ ಪ್ರಕರಣವನ್ನು ವಿಷಯಾಂತರಗೊಳಿಸದೆ, ಘರ್ಷಣೆ ನಿವಾರಣೆಗೆ ಕ್ರಮ ಕೈಗೊಳ್ಳುವ ಅಗತ್ಯೆ ಇದೆ ಎಂದು ಹೇಳಿದೆ.