ಚೆನ್ನೈ: ನೈರುತ್ಯ ಮುಂಗಾರು ಜೂನ್ 9ರಂದು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಅರೇಬಿಯನ್ ಸಮುದ್ರದ ಮೂಲಕ ಕರ್ನಾಟಕ-ಕೇರಳ ತೀರಗಳಿಗೆ ಮಾನ್ಸೂನ್ 9ನೇ ತಾರೀಖಿನಿಂದ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ಹಲವು ಭಾಗಗಳಲ್ಲಿ ಅವ್ಯಾಹತ ಮಳೆ ಸುರಿದಿದ್ದು, ಇಂದು ಬೆಳಗ್ಗೆಯಷ್ಟೇ ನಿಂತಿತು ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ.
ಚೆನ್ನೈ ಸೇರಿದಂತೆ ಹಲವು ಭಾಗಗಳಲ್ಲಿ ಬೇಸಿಗೆಯ ಮಳೆ ಗುಡುಗು-ಮಿಂಚು ಸಹಿತ ಸುರಿದಿದೆ.
Advertisement