ಕಾಶ್ಮೀರದ ಉಧಂಪುರದಲ್ಲಿ ಸಿಆರ್​ಪಿಎಫ್ ಯೋಧರ ಮೇಲೆ ದಾಳಿ, ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಕುಡ್ ಪ್ರದೇಶದಲ್ಲಿ ಸೋಮವಾರ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಕುಡ್ ಪ್ರದೇಶದಲ್ಲಿ ಸೋಮವಾರ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್​ಪಿಎಫ್) ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಾರೆ.
ಇಂದು ಉಗ್ರರು ಕಾಶ್ಮೀರ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿದ್ದರು. ಈ ವೇಳೆ  ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಸಿಆರ್​ಪಿಎಫ್ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ಧಾರೆ. ಪ್ರತಿ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ ಎಂದು ಉಧಂಪುರದ ಎಸ್​ಎಸ್​ಪಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭೀಕರ ಗುಂಡಿನ ಕಾಳಗ ನಡೆಯುತ್ತಿದೆ. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೂ ಘಟನಾ ಸ್ಥಳದತ್ತ ಹೊರಟಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com