ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಅಂಜನ್ ದತ್ತ ಅವರು ಗುರುವಾರ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅಂಜನ್ ದತ್ತ ಅವರು ರಾಜಧಾನಿ ದೆಹಲಿಯ ಎಐಐಎಂಎಸ್ (ಏಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಧರೆ, ಚಿಕಿತ್ಸೆ ಫಲಕಾರಿಯಾಗದೆ ಎಂದು ಮುಂಜಾನೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
2014ರ ಡಿಸೆಂಬರ್ ತಿಂಗಳಿನಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದ ದತ್ತ ಅವರು 3 ಬಾರಿ ಅಸ್ಸಾಂನ ಅಂಗುರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದಿದ್ದರು. ಅಲ್ಲದೆ, ಅಸ್ಸಾಂ ರಾಜ್ಯ ಸಾರಿಗೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅಂಜನ್ ದತ್ತ ಸಾವು ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಆಸ್ಪತ್ರೆಗೆ ಭೇಟಿನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
Advertisement