ಸಿಂಹದ ಜೊತೆ ರವೀಂದ್ರ ಜಡೇಜಾ ಫೋಟೋ ವೈರಲ್ : ತನಿಖೆಗೆ ಆದೇಶ

ಕ್ರಿಕೆಟಿಗ ರವೀಂದ್ರ ಜಡೇಜಾ ಗುಜರಾತ್​ನ ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಿಂಹಗಳ ಮುಂದೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ..
ಸಿಂಹದ ಮುಂದೆ ಕುಳಿತು ರವೀಂದ್ರ ಜಡೇಜಾ ಮತ್ತು ಪತ್ನಿ ಫೋಟೋ
ಸಿಂಹದ ಮುಂದೆ ಕುಳಿತು ರವೀಂದ್ರ ಜಡೇಜಾ ಮತ್ತು ಪತ್ನಿ ಫೋಟೋ
Updated on

ರಾಜ್​ಕೋಟ್: ಕ್ರಿಕೆಟಿಗ ರವೀಂದ್ರ ಜಡೇಜಾ ಗುಜರಾತ್​ನ ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಿಂಹಗಳ ಮುಂದೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತುತಿದ್ದಂತೆಯೇ ಈ ಬಗ್ಗೆ ತನಿಖೆ ನಡೆಸುವಂತೆ ಗುಜರಾತ್ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ರವೀಂದ್ರ ಜಡೇಜಾ ಗಿರ್ ರಾಷ್ಟ್ರೀಯ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ವಾಹನದಿಂದ ಕೆಳಗಿಳಿದ ಜಡೇಜಾ ಮತ್ತು ಅವರ ಪತ್ನಿ ಸಿಂಹಗಳ ಮುಂದೆ ಫೋಟೋ ತೆಗೆಸಿದ್ದಾರೆ. ಇದಲ್ಲದೆ ಅಲ್ಲಿನ ಅರಣ್ಯ ಸಿಬ್ಬಂದಿಯೊಡನೆ ಸೆಲ್ಪಿ ತೆಗೆದುಕೊಂಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹೀಗಾಗಿ ಇಲಾಖೆ ತನಿಖೆಗೆ ಆದೇಶ ಹೊರಡಿಸಿದೆ.

ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರವಾಸಿಗರು ವಾಹನದಿಂದ ಕೆಳಗಿಳಿಯುವಂತಿಲ್ಲ. ಆದರೆ ಪೋಟೋಗಳಲ್ಲಿ ಜಡೇಜಾ ಅವರು ವಾಹನದಿಂದ ಕೆಳಗಿಳಿದು ಸಿಂಹಗಳ ಮುಂದೆ ಫೋಟೋ ತೆಗೆಸಿದ್ದು ಸ್ಪಷ್ಟವಾಗಿದೆ. ಇನ್ನೂ ಮಳೆಗಾಲವಾಗಿರುವುದರಿಂದ 4 ತಿಂಗಳು ಅರಣ್ಯಧಾಮ ಕ್ಲೋಸ್ ಆಗಿರುತ್ತದೆ. ಮತ್ತೆ ಅಕ್ಟೋಬರ್ 15 ಕ್ಕೆ ತೆರೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com