ರಾಜ್ಕೋಟ್: ಕ್ರಿಕೆಟಿಗ ರವೀಂದ್ರ ಜಡೇಜಾ ಗುಜರಾತ್ನ ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಿಂಹಗಳ ಮುಂದೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತುತಿದ್ದಂತೆಯೇ ಈ ಬಗ್ಗೆ ತನಿಖೆ ನಡೆಸುವಂತೆ ಗುಜರಾತ್ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ರವೀಂದ್ರ ಜಡೇಜಾ ಗಿರ್ ರಾಷ್ಟ್ರೀಯ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ವಾಹನದಿಂದ ಕೆಳಗಿಳಿದ ಜಡೇಜಾ ಮತ್ತು ಅವರ ಪತ್ನಿ ಸಿಂಹಗಳ ಮುಂದೆ ಫೋಟೋ ತೆಗೆಸಿದ್ದಾರೆ. ಇದಲ್ಲದೆ ಅಲ್ಲಿನ ಅರಣ್ಯ ಸಿಬ್ಬಂದಿಯೊಡನೆ ಸೆಲ್ಪಿ ತೆಗೆದುಕೊಂಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹೀಗಾಗಿ ಇಲಾಖೆ ತನಿಖೆಗೆ ಆದೇಶ ಹೊರಡಿಸಿದೆ.
ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರವಾಸಿಗರು ವಾಹನದಿಂದ ಕೆಳಗಿಳಿಯುವಂತಿಲ್ಲ. ಆದರೆ ಪೋಟೋಗಳಲ್ಲಿ ಜಡೇಜಾ ಅವರು ವಾಹನದಿಂದ ಕೆಳಗಿಳಿದು ಸಿಂಹಗಳ ಮುಂದೆ ಫೋಟೋ ತೆಗೆಸಿದ್ದು ಸ್ಪಷ್ಟವಾಗಿದೆ. ಇನ್ನೂ ಮಳೆಗಾಲವಾಗಿರುವುದರಿಂದ 4 ತಿಂಗಳು ಅರಣ್ಯಧಾಮ ಕ್ಲೋಸ್ ಆಗಿರುತ್ತದೆ. ಮತ್ತೆ ಅಕ್ಟೋಬರ್ 15 ಕ್ಕೆ ತೆರೆಯಲಿದೆ.
Advertisement