ಸಿಂಹದ ಜೊತೆ ರವೀಂದ್ರ ಜಡೇಜಾ ಫೋಟೋ ವೈರಲ್ : ತನಿಖೆಗೆ ಆದೇಶ

ಕ್ರಿಕೆಟಿಗ ರವೀಂದ್ರ ಜಡೇಜಾ ಗುಜರಾತ್​ನ ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಿಂಹಗಳ ಮುಂದೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ..
ಸಿಂಹದ ಮುಂದೆ ಕುಳಿತು ರವೀಂದ್ರ ಜಡೇಜಾ ಮತ್ತು ಪತ್ನಿ ಫೋಟೋ
ಸಿಂಹದ ಮುಂದೆ ಕುಳಿತು ರವೀಂದ್ರ ಜಡೇಜಾ ಮತ್ತು ಪತ್ನಿ ಫೋಟೋ

ರಾಜ್​ಕೋಟ್: ಕ್ರಿಕೆಟಿಗ ರವೀಂದ್ರ ಜಡೇಜಾ ಗುಜರಾತ್​ನ ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಿಂಹಗಳ ಮುಂದೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತುತಿದ್ದಂತೆಯೇ ಈ ಬಗ್ಗೆ ತನಿಖೆ ನಡೆಸುವಂತೆ ಗುಜರಾತ್ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ರವೀಂದ್ರ ಜಡೇಜಾ ಗಿರ್ ರಾಷ್ಟ್ರೀಯ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ವಾಹನದಿಂದ ಕೆಳಗಿಳಿದ ಜಡೇಜಾ ಮತ್ತು ಅವರ ಪತ್ನಿ ಸಿಂಹಗಳ ಮುಂದೆ ಫೋಟೋ ತೆಗೆಸಿದ್ದಾರೆ. ಇದಲ್ಲದೆ ಅಲ್ಲಿನ ಅರಣ್ಯ ಸಿಬ್ಬಂದಿಯೊಡನೆ ಸೆಲ್ಪಿ ತೆಗೆದುಕೊಂಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹೀಗಾಗಿ ಇಲಾಖೆ ತನಿಖೆಗೆ ಆದೇಶ ಹೊರಡಿಸಿದೆ.

ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರವಾಸಿಗರು ವಾಹನದಿಂದ ಕೆಳಗಿಳಿಯುವಂತಿಲ್ಲ. ಆದರೆ ಪೋಟೋಗಳಲ್ಲಿ ಜಡೇಜಾ ಅವರು ವಾಹನದಿಂದ ಕೆಳಗಿಳಿದು ಸಿಂಹಗಳ ಮುಂದೆ ಫೋಟೋ ತೆಗೆಸಿದ್ದು ಸ್ಪಷ್ಟವಾಗಿದೆ. ಇನ್ನೂ ಮಳೆಗಾಲವಾಗಿರುವುದರಿಂದ 4 ತಿಂಗಳು ಅರಣ್ಯಧಾಮ ಕ್ಲೋಸ್ ಆಗಿರುತ್ತದೆ. ಮತ್ತೆ ಅಕ್ಟೋಬರ್ 15 ಕ್ಕೆ ತೆರೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com