ಶ್ರೀನಗರ: ಜಮ್ಮು-ಕಾಶ್ಮೀರದ ಸಪೋರಾ ಪ್ರದೇಶದಲ್ಲಿ ಭದ್ರತಾ ಯೋಧರು ಮತ್ತು ಉಗ್ರಗಾಮಿಗಳ ನಡುವಿನ ದಾಳಿ ಮುಂದುವರಿದಿದ್ದು, ಶುಕ್ರವಾರ ಬೆಳಗ್ಗೆ ಮನೆಯೊಳಗೆ ಸೇರಿಕೊಂಡಿದ್ದ ಭಯೋತ್ಪಾದಕನನ್ನು ಕೊಂದುಹಾಕುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ತಪ್ಪಿಸಿಕೊಂಡಿದ್ದಾನೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಒಳನುಸುಳಲು ಯತ್ನಿಸಿದಾಗ ಯೋಧರು ನಾಲ್ವರು ಉಗ್ರಗಾಮಿಗಳನ್ನು ಕೊಂದುಹಾಕಿದ್ದಾರೆ.
ಕಾಶ್ಮೀರದ ತಂಗ್ದಾರ್ ವಲಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಿನ್ನೆ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ. ಉಗ್ರರು ಭಾರತದ ಪ್ರಾಂತ್ಯದೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದರು.
Advertisement