ಶ್ರೀನಗರ: ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಲಷ್ಕರ್ ಇ ತೊಯ್ಬಾ ಉಗ್ರರ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಲೋಲಬ ಪ್ರದೇಶದ ದೋಬ್ವಾನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರುವ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಕಾಶ್ಮೀರದ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದರು.
ಜಂಟಿ ಕಾರ್ಯಾಚರಣೆ ವೇಳೆ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ನಡೆಸಿದ ಗುಂಡಿನ ಕಾಳಗದಲ್ಲಿ ಮೂವರು ಯೋಧರು ಮೃತಪಟ್ಟಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
Advertisement