ಉತ್ತರಪ್ರದೇಶದಲ್ಲಿ ಲಂಚದ ಹಣಕ್ಕಾಗಿ ಬಡಿದಾಡಿಕೊಂಡ ಪೊಲೀಸರು

ಭ್ರಷ್ಟರಿಗೆ ಸಿಂಹಸ್ವಪ್ನರಾಗಬೇಕಿದ್ದ ಪೊಲೀಸರೇ ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...
ಪೊಲೀಸ್
ಪೊಲೀಸ್

ಭ್ರಷ್ಟರಿಗೆ ಸಿಂಹಸ್ವಪ್ನರಾಗಬೇಕಿದ್ದ ಪೊಲೀಸರೇ ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಲಂಚದ ಹಣಕ್ಕಾಗಿ ನಾಲ್ವರು ಪೊಲೀಸರು ನಡುರಸ್ತೆಯಲ್ಲಿ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿದ್ದು, ಈ ದೃಶ್ಯಾವಳಿಗಳನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಬೀದಿ ಬದಿಯ ವ್ಯಾಪಾರಿಗಳ ಬಳಿ ಲಂಚ ಪಡೆದು ಅದನ್ನು ತೆಗೆದುಕೊಳ್ಳಲು ತಾ ಮುಂದು ನಾ ಮುಂದು ಎಂದು ನಾಲ್ವರು ಪೊಲೀಸರು ಬಡಿದಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com