ವೆಂಕಯ್ಯ ನಾಯ್ಡು ಅವರು ಇಂದು ತುರ್ತಾಗಿ ಹೈದರಾಬಾದ್ಗೆ ತೆರಳುತ್ತಿದ್ದರು. ಮಧ್ಯಾಹ್ನ 1.15ಕ್ಕೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಪೈಲೆಟ್ ಬಂದಿಲ್ಲ ಎಂಬ ಕಾರಣಕ್ಕಾಗಿ 1.45 ಆದರೂ ಹೊರಡಲೇ ಇಲ್ಲ. ವಿಮಾನ ಹಾರಾಟ ವಿಳಂಬವಾಗಿದೆ ಎಂದು ಏರ್ ಇಂಡಿಯಾ ತಿಳಿಸಿತ್ತು. 12.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನಾಯ್ಡು, ವಿಮಾನ ವಿಳಂಬದಿಂದ ಬೇಸತ್ತ ಮನೆಗೆ ವಾಪಸ್ಸಾಗಿದ್ದರು. ನಂತರ ಟ್ವಿಟರ್ನಲ್ಲಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದು, ಏರ್ ಇಂಡಿಯಾ ವಿರುದ್ಧ ಕಿಡಿ ಕಾರಿದ್ದಾರೆ.