ಹರೀಶ್ ಕುಮಾರ್ ಅವರ ಸಿಟ್ಟನ್ನು ಶಾಂತಗೊಳಿಸುವ ಸಲುವಾಗಿ ಸಹೋದ್ಯೋಗಿಗಳು ಗರ್ಭಿಣಿಯಾಗಿರುವ ಆತನ ಪತ್ನಿ ಪ್ರಿಯಾಂಕಾ ಕುಮಾರಿ ಅವರನ್ನು ಘಟನಾ ಸ್ಥಳಕ್ಕೆ ಕರೆತರಲಾಯಿತು. ಅಲ್ಲಿಯೂ ಸುಮಾರು ಒಂದು ಗಂಟೆಗಳ ಕಾಲ ಆತ ಪ್ರಿಯಾಂಕಾಳೊಂದಿಗೆ ವಾಗ್ವಾದ ಮಾಡಿದ್ದಾನೆ. ನಂತರ ಪ್ರಿಯಾಂಕಳಿಗೂ ಗುಂಡಿಟ್ಟು, ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಗುಂಡು ತಾಗಿದ ಇವರಿಬ್ಬರನ್ನೂ ಕೂಡಲೇ ಚಿಪ್ಲುನ್ ನಲ್ಲಿರುವ ಆಸ್ಪತ್ರೆಗೆ ಸಾಗಿಸಿದ್ದು, ಇವರಿಬ್ಬರೂ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.