ಮಾನನಷ್ಟ ಮೊಕದ್ದಮೆ: ಕೇಜ್ರಿವಾಲ್, ಆಜಾದ್ ಗೆ ಲಿಖಿತ ಪ್ರತಿಕ್ರಿಯೆ ನೀಡಲು ಹೈಕೋರ್ಟ್ ಸೂಚನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅಮಾನತುಗೊಂಡ ಬಿಜೆಪಿ ಸಂಸದ ಕೀರ್ತಿ ಆಜಾದ್ ಮತ್ತು ಇತರೆ...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅಮಾನತುಗೊಂಡ ಬಿಜೆಪಿ ಸಂಸದ ಕೀರ್ತಿ ಆಜಾದ್ ಮತ್ತು ಇತರೆ ಎಎಪಿ ನಾಯಕರ ವಿರುದ್ಧ  ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ಮಾನನಷ್ಟ ಮೊಕದ್ದಮೆ ದಾಖಲಿಸಿರುವುದರ ಸಂಬಂಧ ಅರವಿಂದ್ ಕೇಜ್ರಿವಾಲ್ ಮತ್ತು ಕೀರ್ತಿ ಆಜಾದ್ ಲಿಖಿತ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ. . 
ಜಂಟಿ ರಿಜಿಸ್ಟ್ರಾರ್ ಅನಿಲ್ ಕುಮಾರ್ ಸಿಸೋಡಿಯಾ ಅವರು, ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ 30 ದಿನದೊಳಗಾಗಿ ಲಿಖಿತ ಪ್ರತಿಕ್ರಿಯೆ ನೀಡುವಂತೆ ಅರವಿಂದ್ ಕೇಜ್ರಿವಾಲ್ ಮತ್ತು ಆಜಾದ್ ಗೆ ಸೂಚಿಸಿದ್ದಾರೆ. 
ಕ್ರಿಕೆಟ್ ಸಂಸ್ಥೆಯ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಕ್ಕಾಗಿ ಅರವಿಂದ್ ಕೇಜ್ರಿವಾಲ್ ಹಾಗೂ ಅಮಾನತುಗೊಂಡ ಬಿಜೆಪಿ ಸಂಸದ ಕೀರ್ತಿ ಆಜಾದ್ ಮತ್ತು ಇತರೆ ಎಎಪಿ ನಾಯಕರ ವಿರುದ್ಧ ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.
ಕೇಜ್ರಿವಾಲ್ ಹಾಗೂ ಆಜಾದ್ ಮಾಡಿರುವ ಆರೋಪಗಳನ್ನು ತೀವ್ರವಾಗಿ ಖಂಡಿಸಿರುವ ಡಿಡಿಸಿಎ, ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಿದೆ ಎಂದು ಹೇಳಿತ್ತು. ಡಿಡಿಸಿಎ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಹೀಗಾಗಿ ದೆಹಲಿ ಸರ್ಕಾರದಿಂದ ಹೊಸ ತನಿಖೆಯ ಅಗತ್ಯ ಇಲ್ಲ ಎಂದು ಚೌಹಾಣ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com