ದೇಶ
ಗೋಡ್ಸೆಯನ್ನು ಆರಾಧಕರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ರಾಜನಾಥ್ ಸಿಂಗ್ ಸೂಚನೆ
ಗೋಡ್ಸೆ ಆರಾಧಕರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ.
ನವದೆಹಲಿ: ಗೋಡ್ಸೆ ಆರಾಧಕರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ.
ಸಂಸತ್ ನಲ್ಲಿ ಮಾತನಾಡಿರುವ ರಾಜನಾಥ್ ಸಿಂಗ್, ನಾಥುರಾಮ್ ಗೋಡ್ಸೆಯನ್ನು ಆರಾಧಿಸುವುದು ಹೇಗೆ ಸಾಧ್ಯವಾಗುತ್ತದೆ? ಗೋಡ್ಸೆಯನ್ನು ಆರಾಧಿಸುವವರ ವಿರುದ್ಧ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಗಳನ್ನು ಕೇಂದ್ರ ಸರ್ಕಾರ ತಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾ.4 ರಂದು ಹಿಂದೂ ಮಹಾಸಭಾದ ಸದಸ್ಯರು ಗೋಡ್ಸೆಯನ್ನು ತಮ್ಮ ನಾಯಕ, ನಮ್ಮ ವಿರುದ್ಧ ಕೈಗೊಳ್ಳುವ ಕ್ರಮಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದರು. ಭಾರತ ಮತ್ತಷ್ಟು ಛಿದ್ರಗೊಳ್ಳದೇ ಇರಲು ಗೋಡ್ಸೆಯೇ ಕಾರಣ ಎಂದು ಹಿಂದೂ ಮಹಾಸಭಾದ ನಾಯಕ ಭರತ್ ರಜಪೂತ್ ಅಭಿಪ್ರಾಯಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜನಾಥ್ ಸಿಂಗ್, ಗೋಡ್ಸೆ ಆರಾಧಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.