ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್

ಯೆಮೆನ್ ಹಡಗಿನಲ್ಲಿ ಬೆಂಕಿ: 2 ಭಾರತೀಯರ ಸಾವು

ಯೆಮೆನ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಭಾರತೀಯರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ...

ನವದೆಹಲಿ: ಯೆಮೆನ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಭಾರತೀಯರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ವಿದೇಶಾಂಗ ಸಚಿವೆ ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತ ಪಡಿಸಿದ್ದು, ಅಲ್ ಸದಾ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ
ಮಹೇಶ ಕುಮಾರ್ ರಾಜಗೋಪಾಲ್ ಮತ್ತು ದೀಪು ಲತಿಕಾ ಮೋಹನ್ ಈ ಇಬ್ಬರನ್ನು ಕಳೆದುಕೊಂಡಿದ್ದೇವೆ, ನಾನು ನನ್ನ ಶೋಕವನ್ನು ವ್ಯಕ್ತಪಡಿಸುತ್ತಿದ್ದೇನೆ’ ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ.

ಇನ್ನು ಗಾಯಾಳುಗಳನ್ನು ಒಮನ್​ನ ಸಲಾಲಹ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಜಿಬೌಟಿ ಮತ್ತು ಒಮನ್​ನಲ್ಲಿನ ನಮ್ಮ ರಾಜತಾಂತ್ರಿಕ ಕಚೇರಿಗಳು ತೊಂದರೆಗೆ ಒಳಗಾದವರಿಗೆ ಎಲ್ಲ ರೀತಿಯ ನೆರವನ್ನೂ ನೀಡುತ್ತಿದೆ’ ಎಂದು ಸುಷ್ಮಾ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com