ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿಶ್ವ ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಸೂಚಿಸಿದ್ದರು. ಆದರೆ ಕಾರ್ಯಕ್ರಮದಿಂದಾಗಿ ಪರಿಸರಕ್ಕೆ ಹಾನಿಯಾಗಲಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ. ಆದರೆ ಈಗಾಗಲೇ ಪ್ರಧಾನಿ, ರಾಷ್ಟ್ರಪತಿ ಹಾಗೂ ರವಿಶಂಕರ್ ಗುರೂಜಿ ಭಾವಚಿತ್ರ ಒಳಗೊಂಡ ಕಟೌಟ್ ಗಳು ದೆಹಲಿಯಾದ್ಯಂತ ರಾರಾಜಿಸುತ್ತಿವೆ.