ನವದೆಹಲಿ: ವಿವಾದಾತ್ಮಕ ಇಶ್ರತ್ ಜಾಹನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಕಾಂಗ್ರೆಸ್ ಒಬ್ಬ ರಾಜಕೀಯ ನಾಯಕನನ್ನು(ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ) ಫಿಕ್ಸ್ ಮಾಡುವ ಉದ್ದೇಶ ಹೊಂದಿತ್ತು ಎಂದು ಮಂಗಳವಾರ ಆರೋಪಿಸಿದ್ದಾರೆ.