ನಾಗೌರ್(ರಾಜಸ್ಥಾನ): ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ದೇಶ ವಿರೋಧಿ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿದ್ದ ಬೆನ್ನಲ್ಲೇ, ವಿಶ್ವವಿದ್ಯಾಲಯಗಳಲ್ಲಿನ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಪರಿಶೀಸಿಲಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಕೇಳಿಕೊಂಡಿದೆ. ಅಲ್ಲದೆ ಜೆಎನ್ ಯುನಲ್ಲಿನ ದೇಶ ವಿರೋಧಿ ಘೋಷಣೆಗಳನ್ನು ಸಹಿಸಿಕೊಂಡಿದ್ದು ಹೇಗೆ ಎಂದು ಪ್ರಶ್ನಿಸಿದೆ.