ಭುವನೇಶ್ವರ್: ಛತ್ತೀಸ್ ಗಡದ ಕಾಂಕರ್ ಅರಣ್ಯ ಪ್ರದೇಶದಲ್ಲಿ ಯೋಧರು ಹಾಗೂ ನಕ್ಸಲರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮರಾಗಿರುವ ಘಟನೆ ಶನಿವಾರ ನಡೆದಿದೆ.
ನಕ್ಸಲರು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಕುರಿತಂತೆ ಮಾಹಿತಿ ತಿಳಿದಿದ್ದ ಬಿಎಸ್ ಎಫ್ ಯೋಧರು ನಿನ್ನೆ ರಾತ್ರಿ ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಯೋಧರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಘಟನೆ ವೇಳೆ 6 ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ರಾತ್ರಿ 2.30ರ ಸುಮಾರಿಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಹೆಲಿಕಾಪ್ಟರ್ ಮೂಲಕ ಸಾಗಿಸುವಾಗ ಇಬ್ಬರು ಯೋಧರು ವೀರಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಗಾಯಗೊಂಡಿರುವ ಉಳಿದ ನಾಲ್ವರು ಯೋಧರಿಗೆ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
Advertisement