ಬಿಹಾರದಲ್ಲಿ ದೋಣಿ ದುರಂತ: 5 ಮಕ್ಕಳ ಜಲಸಮಾಧಿ

ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಗುಸರೈ: ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಒಟ್ಟು 13 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಕುಮಾರ್ ಸಂಘ್ ಗ್ರಾಮದ ಬಳಿಯ ಸಿಗ್ರೈಲಾ ತೊರೆಯಲ್ಲಿ ಮುಳುಗಿದ್ದು, ಮೂವರು ಬಾಲಕು ಈಜಿ ದಡ ಸೇರಿ ಪ್ರಾಣಾಪಾಯದಿಂದ  ಪಾರಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಗಳು ಕೂಡಲೇ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಐದು ಮೃತ  ದೇಹಗಳು ದೊರೆತಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ದೋಣಿಯಲ್ಲಿ ತೆರಳುತ್ತಿದ್ದವರೆಲ್ಲರೂ ಕುಮಾರ್ ಸಂಘ್ ಗ್ರಾಮದವರೆಂದು ತಿಳಿದುಬಂದಿದ್ದು, ಮೃತರನ್ನು ರೂಪಮ್ ಕುಮಾರಿ (8 ವರ್ಷ), ಅಭಿಷೇಕ್ ಕುಮಾರ್ (10 ವರ್ಷ), ಜಿತ್ನಿ ಕುಮಾರಿ (12  ವರ್ಷ), ಛೊಟ್ಕಿಕುಮಾರಿ (8 ವರ್ಷ) ಮತ್ತು ಸಚಿನ್ (10 ವರ್ಷ) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ಸಾವು-ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ರಕ್ಷಣಾ ತಂಡದ  ಅಧಿಕಾರಿಗಳು ಹೇಳುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com