ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕನ್ಹಯ್ಯ ಕುಮಾರ್ ವಿರುದ್ಧ ಕ್ರಮಕ್ಕೆ ನಿರ್ದೇಶನ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಪ್ರತಿಭಾ ರಾಣಿ ಅವರು, ಯಾವುದೇ ದೇಶ ವಿರೋಧಿ ಘೋಷಣೆ ಕೂಗಿದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನು ಸುವ್ಯವಸ್ಥೆ ಇದೆ. ಈ ಬಗ್ಗೆ ನೀವು ಚಿಂತಿಸುವ ಅಗತ್ಯ ಇಲ್ಲ ಎಂದು ಅರ್ಜಿದಾರರಿಗೆ ಹೇಳಿದರು.