ಡೆಹ್ರಾಡೂನ್: ಸೋಮವಾರ ಡೆಹ್ರಾಡೂನ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಮುಸ್ಸೂರಿಯ ಬಿಜೆಪಿ ಶಾಸಕ ಗಣೇಶ್ ಜೋಷಿ ಪೊಲೀಸ್ ಪಡೆಯ ಕುದುರೆಗೆ ಹೊಡೆದು ಅದರ ಕಾಲು ಮುರಿದ ಘಟನೆ ವರದಿಯಾಗಿದೆ. ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಿಧಾನ ಸಭೆಯ ಮುಂದೆ ಪ್ರತಿಭಟನೆ ಕೈಗೊಂಡಿದ್ದು, ಈ ವೇಳೆ ಅಲ್ಲಿದ್ದ ಪೊಲೀಸ್ ಪಡೆಯ ಕುದುರೆಯ ಮೇಲೆ ಜೋಷಿ ಹಲ್ಲೆ ಮಾಡಿದ್ದಾರೆ.