ಪ್ರಶ್ನೋತ್ತರ ಅವಧಿಯ ನಂತರ ಬಿಜೆಪಿ, ಕಾಂಗ್ರೆಸ್ ಹಾಗೂ ಸಿಪಿಐಎಂನ ಸದಸ್ಯರು ಒಟ್ಟಾಗಿ ಟಿಎಂಸಿ ಸಂಸದರ ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಾತನಾಡಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಟಿಎಂಸಿ ಸಂಸದರ ವಿರುದ್ಧ ಗಂಭೀರ ಆರೋಪ ಬಂದಿದ್ದು, ಇದು ಸಂಸತ್ತಿನ ವಿಶ್ವಾಸಾರ್ಹತೆಯ ಪ್ರಶ್ನೆ ಎಂದರು. ಅಲ್ಲದೆ ಈ ಕುರಿತು ಲೋಕಸಭಾ ನೀತಿ ಸಮಿತಿ ತನಿಖೆ ನಡೆಸಲಿದೆ ಎಂದು ಘೋಷಿಸಿದರು.