ಮಹಾ ಸದನ ಹಗರಣ: ಭುಜಬಲ್ ಗೆ ಮಾರ್ಚ್ 31ರವರೆಗೆ ನ್ಯಾಯಾಂಗ ಬಂಧನ

ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ...
ಛಗನ್‌ ಭುಜಬಲ್‌
ಛಗನ್‌ ಭುಜಬಲ್‌
ಮುಂಬೈ: ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ ಛಗನ್‌ ಭುಜಬಲ್‌ ಅವರನ್ನು ಮಾರ್ಚ್ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
ಹಣ ದುರ್ಬಳಕೆ ಆರೋಪದ ಮೇಲೆ ಭುಜಬಲ್‌ ಅವರನ್ನು ಮಾರ್ಚ್ 14ರಂದು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಮುಂಬಯಿ ಸೆಶನ್ಸ್‌ ಕೋರ್ಟಿನ ವಿಶೇಷ ಪಿಎಂಎಲ್‌ಎ ಕೋರ್ಟ್ ಗೆ ಹಾಜರುಪಡಿಸಿ, ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು. 
ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿಯನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಇಂದು ಮತ್ತೆ ಪಿಎಂಎಲ್ ಎ ಕೋರ್ಟ್ ಗೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಲಾಯವು ಭುಜಬಲ್‌, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿ ಇವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com