ಮುಳುಗುತ್ತಿದ್ದ ಹಡಗಿನಿಂದ 8 ಮಂದಿಯನ್ನು ರಕ್ಷಿಸಿದ ಭಾರತೀಯ ಕರಾವಳಿ ಕಾವಲು ಪಡೆ

ಮುಳುಗುತ್ತಿದ್ದ ಸೆಲ್ವಮಾತಾ ಹಡಗಿನಿಂದ 8 ಮಂದಿಯನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ...
ಕರಾವಳಿ ಕಾವಲು ಪಡೆ
ಕರಾವಳಿ ಕಾವಲು ಪಡೆ

ಕೋಳಿಕ್ಕೊಡ್(ಕೇರಳ): ಮುಳುಗುತ್ತಿದ್ದ ಸೆಲ್ವಮಾತಾ ಹಡಗಿನಿಂದ 8 ಮಂದಿಯನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಸೆಲ್ವಮಾತಾ ಹಡಗು ಕೇರಳದ ಬೀಪೋರ್​ನಿಂದ ಲಕ್ಷ ದ್ವೀಪಕ್ಕೆ ಹೊರಟಿತ್ತು. ಆದರೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಹಡಗು ಮುಳುಗುತ್ತಿರುವುದನ್ನು ಗಮನಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ ಹಡಗಿನಲ್ಲಿದ್ದ 8 ಮಂದಿಯನ್ನು ರಕ್ಷಿಸಿದ್ದಾರೆ.

ಸದ್ಯ 8 ಮಂದಿಯು ಆರೋಗ್ಯದಿಂದ ಇದ್ದಾರೆ. ಯಾವುದೇ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com